ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಸ್ಥಾಯಿ ಸಮಿತಿ ರಚನೆ ನಗರಸಭೆಯಲ್ಲಿ ಕೋಲಾಹಲ ವಿರೋಧ ಪಕ್ಷದ ಸದಸ್ಯರಿಂದ ನ್ಯಾಯಾಲಯದ ಮೋರೆ ಸಾಧ್ಯತೆ

ರಾಣೆಬೆನ್ನೂರ: ಇಲ್ಲಿಯ ನಗರಸಭೆ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ರಚನೆ ಕುರಿತ ವಿಷಯ ಬಂದಾಗ ತಮ್ಮ ಸಂಖ್ಯಾಬಲದ ಅರಿವಿಲ್ಲದೆ ವಿಷಯ ಮಂಡನೆಗೆ ಅನುಮೋದನೆ ನೀಡಿದ ನಗರಸಭೆ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ ಪೇಚೆಗೆ ಸಿಲುಕಿದ ಘಟನೆ ಗುರುವಾರ ನಡೆಯಿತು.

ನಗರಸಭೆ ಸ್ಥಾಯಿ ಸಮಿತಿ ರಚನೆ ವಿಷಯ ಬಂದಾಗ ಆಡಳಿತ ಪಕ್ಷದ ಸದಸ್ಯ ಹುಚ್ಚಪ್ಪ ಮೇಡ್ಲೇರಿ 9 ಜನ ಸದಸ್ಯರ ಹೆಸರು ಹೇಳಿ ವಿಷಯ ಸೂಚಿಸಿದರು. ಇದಕ್ಕೆ ನಿಂಗರಾಜ ಕೋಡಿಹಳ್ಳಿ ಅನುಮೋದಿಸಿದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯ ಪ್ರಕಾಶ ಬುರಡಿಕಟ್ಟಿ ಈ ವಿಷಯ ಅನುಮೋದನೆಗೆ ಸಭೆಯಲ್ಲಿ ನಿಮ್ಮ ಸದಸ್ಯರ ಸಂಖ್ಯಾಬಲ ಕಡಿಮೆಯಿದ್ದು, ಈ ನೂತನ ಸ್ಥಾಯಿ ಸಮಿತಿಗೆ ನಮ್ಮ ವಿರೋಧವಿದ್ದು, ನಾವುಗಳು ಸೇರಿ ನೂತನವಾಗಿ ಹೊಸ ಸ್ಥಾಯಿ ಸಮಿತಿ ರಚನೆ ಮಾಡುತ್ತೇವೆ ಎಂದು 9 ಜನ ಬಿಜೆಪಿ ಸದಸ್ಯರ ಹೆಸರು ಉಪ ಸೂಚನೆ ಕೊಟ್ಟರು. ಅದಕ್ಕೆ ಪ್ರಕಾಶ ಪೂಜಾರ ಅನುಮೋದಿಸಿದರು.

ಪ್ರಕಾಶ ಬುರಡಿಕಟ್ಟಿ ಮಂಡಿಸಿದ ಉಪ ಸೂಚನೆ ಬಳಿಕ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ ಇದನ್ನು ಮತ ಹಾಕಬೇಕಿತ್ತು ಅಥವಾ ಉಪ ಸೂಚನೆಯಂತೆ ಸ್ಥಾಯಿ ಸಮಿತಿ ರಚನೆ ಮಾಡಬೇಕಿತ್ತು. ಆದರೆ, ಅಧ್ಯಕ್ಷರು ತಮ್ಮ ಸಂಖ್ಯಾಬಲ ಕಡಿಮೆ ಇರುವುದು ಖಾತ್ರಿಯಾದ ಕೂಡಲೇ ಏಕಾಏಕಿ ಮೂರು ದಿನ ಬಿಟ್ಟು ಈ ವಿಷಯ ಚರ್ಚೆ ಮಾಡೋಣ ಎಂದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಕಾಶ ಬುರಡಿಕಟ್ಟಿ, ವಿಷಯ ಮಂಡಿಸಿದ ಬಳಿಕ ಅದನ್ನು ಮುಂದೂಡಲು ಅವಕಾಶವಿರುವುದಿಲ್ಲ. ಅಲ್ಲದೆ ಇದು ಪೌರಾಡಳಿತ ಕಾಯ್ದೆ ಪ್ರಕಾರ ಉಲ್ಲಂನೆ ಆಗಲಿದೆ ಎಂದು ತಿಳಿಸಿದರು. ಆದರೂ ಅಧ್ಯೆ ಚಂಪಾ ಬಿಸಲಹಳ್ಳಿ ಸಭೆಯನ್ನು ಮುಂದೂಡಿ ಹೊರ ನಡೆದರು.

ಆಗ ಆಕ್ರೋಶಗೊಂಡ ವಿರೋಧ ಪಕ್ಷದ ಎಲ್ಲ ಸದಸ್ಯರು, ಸಭೆ ಮುಂದೂಡಲು ಅವಕಾಶವಿಲ್ಲ ಎಂದು ಆಡಳಿತ ಪಕ್ಷದವರ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಆಯುಕ್ತರಿಗೆ ತಿಳಿಸಿದರೂ ಆಯುಕ್ತರು ಮಾತ್ರ ಇದು ಅಧ್ಯಕ್ಷರ ನೀರ್ಣಯ ನಾನೇನೂ ಮಾಡಲು ಆಗಲ್ಲ ಎಂದು ಹೊರ ನಡೆದರು

ಆಡಳಿತ ಪಕ್ಷದವರು ಹೊರ ನಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸದಸ್ಯ ಪ್ರಕಾಶ ಬುರಡಿಕಟ್ಟಿ, ನಗರಸಭೆ ಅಧ್ಯೆ ಚಂಪಕ್ಕ ಬಿಸಲಹಳ್ಳಿ ಪೌರಾಡಳಿತ ಕಾಯ್ದೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕಾಂಗ್ರೆಸ್ನವರು ನಾವು ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಾರೆ. ಆದರೆ, ಅವರ ಪಕ್ಷದ ಅಧ್ಯಕ್ಷರೇ ಸಂವಿಧಾನ ವಿರೋಧ ಚಟುವಟಿಕೆ ಮಾಡಿದ್ದಾರೆ. ಆದ್ದರಿಂದ ಈ ಕುರಿತು ಜಿಲ್ಲಾಧಿಕಾರಿ, ಡಿಎಂಎ ಅವರಿಗೆ ದೂರು ನೀಡುತ್ತೇವೆ. ಇವರಿಂದ ನ್ಯಾಯ ದೊರೆಯದಿದ್ದರೆ ಹೈಕೋರ್ಟ್ ಮೋರೆ ಹೋಗುತ್ತೇವೆ ಎಂದು ಎಚ್ಚರಿಸಿದರು.

ಸದಸ್ಯರಾದ ಪ್ರಕಾಶ ಪೂಜಾರ, ಮಂಜುಳಾ ಹತ್ತಿ, ರೂಪಾ ಚಿನ್ನಿಕಟ್ಟಿ, ರಾಜು ಅಡ್ಮನಿ, ಪಾಂಡುರಂಗ ಗಂಗಾವತಿ, ಹನುಮಂತಪ್ಪ ಹೆದ್ದೇರಿ, ಪ್ರಭಾವತಿ ತಿಳವಳ್ಳಿ, ರತ್ನವ್ವ ಪೂಜಾರ, ಕವಿತಾ ಹೆದ್ದೇವಿ, ಗಂಗಮ್ಮ ಹಾವನೂರ, ಸಿದ್ದಪ್ಪ ಬಾಗಲರ ಮತ್ತಿತರರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!