ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಸ್ಥಾಯಿ ಸಮಿತಿ ರಚನೆ ನಗರಸಭೆಯಲ್ಲಿ ಕೋಲಾಹಲ ವಿರೋಧ ಪಕ್ಷದ ಸದಸ್ಯರಿಂದ ನ್ಯಾಯಾಲಯದ ಮೋರೆ ಸಾಧ್ಯತೆ

ರಾಣೆಬೆನ್ನೂರ: ಇಲ್ಲಿಯ ನಗರಸಭೆ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ರಚನೆ ಕುರಿತ ವಿಷಯ ಬಂದಾಗ ತಮ್ಮ ಸಂಖ್ಯಾಬಲದ ಅರಿವಿಲ್ಲದೆ ವಿಷಯ ಮಂಡನೆಗೆ ಅನುಮೋದನೆ ನೀಡಿದ ನಗರಸಭೆ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ ಪೇಚೆಗೆ ಸಿಲುಕಿದ ಘಟನೆ ಗುರುವಾರ ನಡೆಯಿತು.

ನಗರಸಭೆ ಸ್ಥಾಯಿ ಸಮಿತಿ ರಚನೆ ವಿಷಯ ಬಂದಾಗ ಆಡಳಿತ ಪಕ್ಷದ ಸದಸ್ಯ ಹುಚ್ಚಪ್ಪ ಮೇಡ್ಲೇರಿ 9 ಜನ ಸದಸ್ಯರ ಹೆಸರು ಹೇಳಿ ವಿಷಯ ಸೂಚಿಸಿದರು. ಇದಕ್ಕೆ ನಿಂಗರಾಜ ಕೋಡಿಹಳ್ಳಿ ಅನುಮೋದಿಸಿದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯ ಪ್ರಕಾಶ ಬುರಡಿಕಟ್ಟಿ ಈ ವಿಷಯ ಅನುಮೋದನೆಗೆ ಸಭೆಯಲ್ಲಿ ನಿಮ್ಮ ಸದಸ್ಯರ ಸಂಖ್ಯಾಬಲ ಕಡಿಮೆಯಿದ್ದು, ಈ ನೂತನ ಸ್ಥಾಯಿ ಸಮಿತಿಗೆ ನಮ್ಮ ವಿರೋಧವಿದ್ದು, ನಾವುಗಳು ಸೇರಿ ನೂತನವಾಗಿ ಹೊಸ ಸ್ಥಾಯಿ ಸಮಿತಿ ರಚನೆ ಮಾಡುತ್ತೇವೆ ಎಂದು 9 ಜನ ಬಿಜೆಪಿ ಸದಸ್ಯರ ಹೆಸರು ಉಪ ಸೂಚನೆ ಕೊಟ್ಟರು. ಅದಕ್ಕೆ ಪ್ರಕಾಶ ಪೂಜಾರ ಅನುಮೋದಿಸಿದರು.

ಪ್ರಕಾಶ ಬುರಡಿಕಟ್ಟಿ ಮಂಡಿಸಿದ ಉಪ ಸೂಚನೆ ಬಳಿಕ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ ಇದನ್ನು ಮತ ಹಾಕಬೇಕಿತ್ತು ಅಥವಾ ಉಪ ಸೂಚನೆಯಂತೆ ಸ್ಥಾಯಿ ಸಮಿತಿ ರಚನೆ ಮಾಡಬೇಕಿತ್ತು. ಆದರೆ, ಅಧ್ಯಕ್ಷರು ತಮ್ಮ ಸಂಖ್ಯಾಬಲ ಕಡಿಮೆ ಇರುವುದು ಖಾತ್ರಿಯಾದ ಕೂಡಲೇ ಏಕಾಏಕಿ ಮೂರು ದಿನ ಬಿಟ್ಟು ಈ ವಿಷಯ ಚರ್ಚೆ ಮಾಡೋಣ ಎಂದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಕಾಶ ಬುರಡಿಕಟ್ಟಿ, ವಿಷಯ ಮಂಡಿಸಿದ ಬಳಿಕ ಅದನ್ನು ಮುಂದೂಡಲು ಅವಕಾಶವಿರುವುದಿಲ್ಲ. ಅಲ್ಲದೆ ಇದು ಪೌರಾಡಳಿತ ಕಾಯ್ದೆ ಪ್ರಕಾರ ಉಲ್ಲಂನೆ ಆಗಲಿದೆ ಎಂದು ತಿಳಿಸಿದರು. ಆದರೂ ಅಧ್ಯೆ ಚಂಪಾ ಬಿಸಲಹಳ್ಳಿ ಸಭೆಯನ್ನು ಮುಂದೂಡಿ ಹೊರ ನಡೆದರು.

ಆಗ ಆಕ್ರೋಶಗೊಂಡ ವಿರೋಧ ಪಕ್ಷದ ಎಲ್ಲ ಸದಸ್ಯರು, ಸಭೆ ಮುಂದೂಡಲು ಅವಕಾಶವಿಲ್ಲ ಎಂದು ಆಡಳಿತ ಪಕ್ಷದವರ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಆಯುಕ್ತರಿಗೆ ತಿಳಿಸಿದರೂ ಆಯುಕ್ತರು ಮಾತ್ರ ಇದು ಅಧ್ಯಕ್ಷರ ನೀರ್ಣಯ ನಾನೇನೂ ಮಾಡಲು ಆಗಲ್ಲ ಎಂದು ಹೊರ ನಡೆದರು

ಆಡಳಿತ ಪಕ್ಷದವರು ಹೊರ ನಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸದಸ್ಯ ಪ್ರಕಾಶ ಬುರಡಿಕಟ್ಟಿ, ನಗರಸಭೆ ಅಧ್ಯೆ ಚಂಪಕ್ಕ ಬಿಸಲಹಳ್ಳಿ ಪೌರಾಡಳಿತ ಕಾಯ್ದೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕಾಂಗ್ರೆಸ್ನವರು ನಾವು ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಾರೆ. ಆದರೆ, ಅವರ ಪಕ್ಷದ ಅಧ್ಯಕ್ಷರೇ ಸಂವಿಧಾನ ವಿರೋಧ ಚಟುವಟಿಕೆ ಮಾಡಿದ್ದಾರೆ. ಆದ್ದರಿಂದ ಈ ಕುರಿತು ಜಿಲ್ಲಾಧಿಕಾರಿ, ಡಿಎಂಎ ಅವರಿಗೆ ದೂರು ನೀಡುತ್ತೇವೆ. ಇವರಿಂದ ನ್ಯಾಯ ದೊರೆಯದಿದ್ದರೆ ಹೈಕೋರ್ಟ್ ಮೋರೆ ಹೋಗುತ್ತೇವೆ ಎಂದು ಎಚ್ಚರಿಸಿದರು.

ಸದಸ್ಯರಾದ ಪ್ರಕಾಶ ಪೂಜಾರ, ಮಂಜುಳಾ ಹತ್ತಿ, ರೂಪಾ ಚಿನ್ನಿಕಟ್ಟಿ, ರಾಜು ಅಡ್ಮನಿ, ಪಾಂಡುರಂಗ ಗಂಗಾವತಿ, ಹನುಮಂತಪ್ಪ ಹೆದ್ದೇರಿ, ಪ್ರಭಾವತಿ ತಿಳವಳ್ಳಿ, ರತ್ನವ್ವ ಪೂಜಾರ, ಕವಿತಾ ಹೆದ್ದೇವಿ, ಗಂಗಮ್ಮ ಹಾವನೂರ, ಸಿದ್ದಪ್ಪ ಬಾಗಲರ ಮತ್ತಿತರರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!