ರಾಣೆಬೇನ್ನೂರು: ನಗರದ ಸಿದ್ದಗಂಗಾ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ನಾಗರಾಜ ಎಸ್.ಕೆ ಅವರಿಗೆ ಪ್ರಸಿದ್ಧ ‘ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ಮಂತ್ರಾಲಯದಲ್ಲಿ ಇತ್ತೀಚೆಗೆ ನಡೆದ ರಾಯರ ವರ್ಧಂತಿ ಮಹೋತ್ಸವದ ಗುರು ವೈಭವೋತ್ಸವ ಅದ್ಧೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸುಬುಧೇಂದ್ರ ತೀರ್ಥರ ಸಾನಿಧ್ಯ ಹಾಗು ಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ನಡೆದ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಪ್ರಶಸ್ತಿಯನ್ನು ಈ ಹಿಂದೆ ಡಾ.ರಾಜ್ಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವ ರಾಜ್ಕುಮಾರ್, ಪುನೀತ್ ರಾಜ್ಕುಮಾರ್, ರಮೇಶ ಅರವಿಂದ ಸೇರಿದಂತೆ ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅದರಂತೆ ರಾಣೆಬೇನ್ನೂರು ನಗರದಲ್ಲಿ ವೈದ್ಯಕೀಯ ಸೇವೆ ಹಾಗೂ ಸಮಾಜ ಸೇವೆಯಲ್ಲಿ ಸುಮಾರು ಹತ್ತಾರು ವರ್ಷಗಳಿಂದ ತಮ್ಮದೇ ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಡಾ.ನಾಗರಾಜ ಎಸ್.ಕೆ ಅವರಿಗೆ ಈ ಬಾರಿ ಮಂತ್ರಾಲಯ ಕ್ಷೇತ್ರದ ಸುಬುಧೇಂದ್ರ ತೀರ್ಥರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.