ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ನಗರಸಭೆ ಅಧ್ಯಕ್ಷೆ ಪೌರಾಡಳಿತ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಬಿಜೆಪಿ ಸದಸ್ಯರ ಆರೋಪ…!

oplus_0

ರಾಣೆಬೇನ್ನೂರು: ನೂತನವಾಗಿ ಆಯ್ಕೆಯಾಗಿರುವ ನಗರಸಭೆ ಅಧ್ಯಕ್ಷೆ ಚಂಪಕಾ ಬೀಸಲಹಳ್ಳಿ ಅವರು ಪೌರಾಡಳಿತ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ಸರ್ವಾಧಿಕಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ‌ ಕೆಪಿಜೆಪಿ ಸದಸ್ಯರು ಆರೋಪ ಮಾಡಿದ್ದಾರೆ.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ಮಾಡಿದ ಅವರು,   ಫೆ.20 ರಂದು ನಡೆದ ಬಜೆಟ್ ಹಾಗೂ ಸಾಮಾನ್ಯ ಸಭೆಯಲ್ಲಿ ಪೌರಾಡಳಿತ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದ ರೀತಿಯಲ್ಲಿ ಅಧಿಕಾರ ದುರ್ಬಳಕೆಯ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡಿದರು.

VID20250311122309

 

ಸದಸ್ಯ ಪ್ರಕಾಶ ಬುರಡಿಕಟ್ಟಿ ಮಾತನಾಡಿ, ಸಾಮಾನ್ಯ ಸಭೆಯಲ್ಲಿ ಸುಮಾರು 103 ವಿಷಯಗಳನ್ನು ಚರ್ಚಿಸಿ ಅನುಮೋದನೆ ನೀಡಲು ಅಧ್ಯಕ್ಷರು ಸಭೆ ಮಾಡಿದ್ದರು ಆದರೆ ವಿರೋಧ ಪಕ್ಷದ ಸದಸ್ಯರು 37 ವಿಷಯಗಳನ್ನು ವಿರೋಧಿಸಿದರೆ ಅವುಗಳನ್ನು ತಮಗೆ ಬೇಕಾದ ರೀತಿಯಲ್ಲಿ ಅನುಮೋದನೆ ಮಾಡಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರ ಸಂವಿಧಾನ ರಕ್ಷಣೆ ಮಾಡುತ್ತವೆ, ಗೌರವವನ್ನು ಮಾಡುತ್ತವೆ ಅನ್ನುತ್ತಾರೆ ಆದರೆ ಶಾಸಕರು ಹಾಗೂ ಆಡಳಿತ ಪಕ್ಷದ ಸದಸ್ಯರು ತಮಗೆ ಬೇಕಾದಂತೆ ವಿಷಯಗಳನ್ನು ಸಭೆಯಲ್ಲಿ ಠರಾವು ಮಾಡಿಕೊಂಡು ಸರ್ವಾಧಿಕಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಮೊನ್ನೆ ನಡೆದ ನಗರಸಭೆಯ ಸಾಮಾನ್ಯ ಸಭೆಯ ಎಲ್ಲಾ ತಪ್ಪುಗಳನ್ನು ಹಾಗೂ ನಿಯಮಗಳ ಉಲ್ಲಂಘನೆ ಬಗ್ಗೆ ಪೌರಾಡಳಿತ ಇಲಾಖೆಯ ಮೇಲಾಧಿಕಾರಿಗಳಿಗೆ ದಾಖಲೆ ಮೂಲಕ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ಮಾಡಿದ ಖರ್ಚನ್ನು ತೆಗೆಯಲು ಈಗಾಗಲೇ ಮಾಡಿದಂತಹ‌ ಕಾಮಗಾರಿಗಳಿಗೆ‌ ಮತ್ತೊಂದು ಯೋಜನೆ ವರದಿ ಹಾಕಿ ಹಣ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ನಗರಸಭೆ ವತಿಯಿಂದ ಹೆದ್ದಾರಿ ಕಾಮಗಾರಿ ಅಭಿವೃದ್ಧಿಗೆ ಅನುದಾನ ಹಾಗೂ ಸರ್ಕಾರಿ ಆಸ್ಪತ್ರೆಗೆ ಮತ್ತೆ ಹಣ ಹಾಕಿದ್ದಾರೆ ಎಂದು ಆರೋಪಿಸಿದರು. ನಗರಸಭೆ ಹಾಗೂ‌ ನಗರ ಅಭಿವೃದ್ಧಿ ಹಣವನ್ನು ದುರುಪಯೋಗ ಪಡಿಸಿಕೊಂಡು, ದುರಾಲೋಚನೆ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದರು.

ಸುದ್ದಿಗೋಷ್ಠಿ ಸಮಯದಲ್ಲಿ ಮಾಜಿ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಗಂಗಮ್ಮ ಹಾವನೂರು, ಪ್ರಕಾಶ ಪೂಜಾರ, ಕವಿತಾ ಹೆದ್ದೇರಿ, ಹನುಮಂತಪ್ಪ ಹೆದ್ದೇರಿ, ಸಿದ್ದಪ್ಪ ಬಾಗಲರ, ಪ್ರಭಾವತಿ ತಿಳವಳ್ಳಿ, ಪಾಂಡುರಂಗ ಗಂಗಾವತಿ, ರತ್ನಮ್ಮ ಪೂಜಾರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!