ರಾಣೆಬೇನ್ನೂರು: ನೂತನವಾಗಿ ಆಯ್ಕೆಯಾಗಿರುವ ನಗರಸಭೆ ಅಧ್ಯಕ್ಷೆ ಚಂಪಕಾ ಬೀಸಲಹಳ್ಳಿ ಅವರು ಪೌರಾಡಳಿತ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ಸರ್ವಾಧಿಕಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಕೆಪಿಜೆಪಿ ಸದಸ್ಯರು ಆರೋಪ ಮಾಡಿದ್ದಾರೆ.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ಮಾಡಿದ ಅವರು, ಫೆ.20 ರಂದು ನಡೆದ ಬಜೆಟ್ ಹಾಗೂ ಸಾಮಾನ್ಯ ಸಭೆಯಲ್ಲಿ ಪೌರಾಡಳಿತ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದ ರೀತಿಯಲ್ಲಿ ಅಧಿಕಾರ ದುರ್ಬಳಕೆಯ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡಿದರು.
ಸದಸ್ಯ ಪ್ರಕಾಶ ಬುರಡಿಕಟ್ಟಿ ಮಾತನಾಡಿ, ಸಾಮಾನ್ಯ ಸಭೆಯಲ್ಲಿ ಸುಮಾರು 103 ವಿಷಯಗಳನ್ನು ಚರ್ಚಿಸಿ ಅನುಮೋದನೆ ನೀಡಲು ಅಧ್ಯಕ್ಷರು ಸಭೆ ಮಾಡಿದ್ದರು ಆದರೆ ವಿರೋಧ ಪಕ್ಷದ ಸದಸ್ಯರು 37 ವಿಷಯಗಳನ್ನು ವಿರೋಧಿಸಿದರೆ ಅವುಗಳನ್ನು ತಮಗೆ ಬೇಕಾದ ರೀತಿಯಲ್ಲಿ ಅನುಮೋದನೆ ಮಾಡಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರ ಸಂವಿಧಾನ ರಕ್ಷಣೆ ಮಾಡುತ್ತವೆ, ಗೌರವವನ್ನು ಮಾಡುತ್ತವೆ ಅನ್ನುತ್ತಾರೆ ಆದರೆ ಶಾಸಕರು ಹಾಗೂ ಆಡಳಿತ ಪಕ್ಷದ ಸದಸ್ಯರು ತಮಗೆ ಬೇಕಾದಂತೆ ವಿಷಯಗಳನ್ನು ಸಭೆಯಲ್ಲಿ ಠರಾವು ಮಾಡಿಕೊಂಡು ಸರ್ವಾಧಿಕಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಅಲ್ಲದೆ ಮೊನ್ನೆ ನಡೆದ ನಗರಸಭೆಯ ಸಾಮಾನ್ಯ ಸಭೆಯ ಎಲ್ಲಾ ತಪ್ಪುಗಳನ್ನು ಹಾಗೂ ನಿಯಮಗಳ ಉಲ್ಲಂಘನೆ ಬಗ್ಗೆ ಪೌರಾಡಳಿತ ಇಲಾಖೆಯ ಮೇಲಾಧಿಕಾರಿಗಳಿಗೆ ದಾಖಲೆ ಮೂಲಕ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇನ್ನೂ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ಮಾಡಿದ ಖರ್ಚನ್ನು ತೆಗೆಯಲು ಈಗಾಗಲೇ ಮಾಡಿದಂತಹ ಕಾಮಗಾರಿಗಳಿಗೆ ಮತ್ತೊಂದು ಯೋಜನೆ ವರದಿ ಹಾಕಿ ಹಣ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ನಗರಸಭೆ ವತಿಯಿಂದ ಹೆದ್ದಾರಿ ಕಾಮಗಾರಿ ಅಭಿವೃದ್ಧಿಗೆ ಅನುದಾನ ಹಾಗೂ ಸರ್ಕಾರಿ ಆಸ್ಪತ್ರೆಗೆ ಮತ್ತೆ ಹಣ ಹಾಕಿದ್ದಾರೆ ಎಂದು ಆರೋಪಿಸಿದರು. ನಗರಸಭೆ ಹಾಗೂ ನಗರ ಅಭಿವೃದ್ಧಿ ಹಣವನ್ನು ದುರುಪಯೋಗ ಪಡಿಸಿಕೊಂಡು, ದುರಾಲೋಚನೆ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದರು.
ಸುದ್ದಿಗೋಷ್ಠಿ ಸಮಯದಲ್ಲಿ ಮಾಜಿ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಗಂಗಮ್ಮ ಹಾವನೂರು, ಪ್ರಕಾಶ ಪೂಜಾರ, ಕವಿತಾ ಹೆದ್ದೇರಿ, ಹನುಮಂತಪ್ಪ ಹೆದ್ದೇರಿ, ಸಿದ್ದಪ್ಪ ಬಾಗಲರ, ಪ್ರಭಾವತಿ ತಿಳವಳ್ಳಿ, ಪಾಂಡುರಂಗ ಗಂಗಾವತಿ, ರತ್ನಮ್ಮ ಪೂಜಾರ ಹಾಜರಿದ್ದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.