ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಗ್ಯಾರಂಟಿ ಯೋಜನೆ ವಿರೋಧಿಸಲ್ಲ, ಬಂದ್ ಮಾಡಿದ್ರ ಹೋರಾಟ ಮಾಡ್ತೇವಿ: ಜಿಲ್ಲಾಧ್ಯಕ್ಷ ಪೂಜಾರ.

 

ರಾಣೆಬೇನ್ನೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಯನ್ನು ನಾವು ವಿರೋಧ ಮಾಡಲ್ಲ ಆದರೆ ಬಂದ್ ಮಾಡಿದ್ರೆ ಬಿಜೆಪಿ ಪಕ್ಷದಿಂದ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

 

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿತ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಹಿಂದುಳಿದ ನಾಯಕರಾಗಿ ಅತಿ ಹೆಚ್ಚು ಬಜೆಟ್ ಮಂಡಿಸಿದ್ದಾರೆ. ಆದರೆ ಹಿಂದುಳಿದ, ದಲಿತ ಜನರಿಗೆ ಏನು ನೀಡದೆ ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ.

ಈ ಸರಿ ಬಜೆಟ್ ಒಳಗೆ ಜಿಲ್ಲೆಯ ಆರು  ಜನ ಕಾಂಗ್ರೆಸ್ ಶಾಸಕರು ಇದ್ದರು ಏನು ಯೋಜನೆ ಘೋಷಣೆ ಮಾಡಿಲ್ಲ ಆದರೆ ಸಿಎಂಗೆ ಗೆಲುವು ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ. ರೈತರಿಗೆ ಅನುಕೂಲಕ್ಕೆ ಯಾವುದೇ ಯೋಜನೆ ನೀಡಿಲ್ಲ ಎಂದರು.

ನಮ್ಮ ಬಿಜೆಪಿ ಸರ್ಕಾರದ ಇದ್ದ ಸಮಯದಲ್ಲಿ ಬಸವರಾಜ ಬೊಮ್ಮಾಯಿ ಅವರು ನೀರಾವರಿಗೆ ಹೆಚ್ಚು ಒತ್ತು ನೀಡಿದ್ದರು, ಯಾವುದೇ ಪರಿಹಾರ ಇದ್ದರೂ 24 ಗಂಟೆಯೊಳಗೆ ಬರಪರಿಹಾರ ಹಾಗೂ ಬೆಳೆಹಾನಿ‌ ಪರಿಹಾರ ನೀಡಿದ್ದು ‌ನಮ್ಮ ಸರ್ಕಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾವುದೇ ಪರಿಹಾರ ನೀಡದೆ ರೈತರನ್ನು ನಿರ್ಲಕ್ಷ್ಯ ಮಾಡಿದೆ.

ಇನ್ನೂ ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಗೆ ಹಣ ಹೊಂದಿಸಲು ಆಗುತ್ತಿಲ್ಲ. ಆದರೆ ದಲಿತರಿಗೆ ಮೀಸಲಾಗಿ‌ ಇಟ್ಟಿದ್ದ ಎಸ್ಸಿಪಿ-ಟಿಎಸ್ಪಿ ಯೋಜನೆಯ ಸುಮಾರು ‌ಇಪ್ಪತ್ತು ನಾಲ್ಕೂವರೆ ಸಾವಿರ ಕೋಟಿ ಹಣವನ್ನು ಬಳಕೆ ಮಾಡಿಕೊಂಡು ದಲಿತರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

 

ರಾಣೆಬೇನ್ನೂರು ನಗರ ಅಭಿವೃದ್ಧಿಗೆ ನಾನು ಇದ್ದ ಸಮಯದಲ್ಲಿ ನಗರೊತ್ಥಾನ ಯೋಜನೆ ಅಡಿಯಲ್ಲಿ ಸುಮಾರು ‌40 ಕೋಟಿ ಹಣವನ್ನು ತರಲಾಗಿದೆ. ಅದ ಹಣದಿಂದ ಇದೀಗ ಕಾಮಗಾರಿ ಮಾಡುತ್ತಿದ್ದಾರೆ. ಆದರೆ ಈವರೆಗೂ ನಮ್ಮ ನಗರಸಭೆಗೆ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

 

ಇನ್ನೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಗರಸಭೆ ಉಪಾಧ್ಯಕ್ಷ ನಾಗರಾಜ ಪವಾರ(ಮಣಿ) ನಗರದಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿರುವ ಪಿ.ಬಿ.ರಸ್ತೆಯ ಆಯತ್ ಹೊಟೆಲ್ ಹಾಗೂ ಎಡಿಬಿ ರಸ್ತೆಯ ಹಣ್ಣಿನ ಅಂಗಡಿಗಳನ್ನು ಒಂದು ವಾರದಲ್ಲಿ ತೆರವು ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿ ಸಮಯದಲ್ಲಿ ಮುಖಂಡರಾದ ನಿಂಗರಾಜ ಕೋಡಿಹಳ್ಳಿ, ಸಿದ್ದಣ್ಣ ಚಿಕ್ಕಬಿದರಿ, ನಾಗರಾಜ ಪವಾರ, ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ರಮೇಶ್ ಕರಡೆಣ್ಣನವರ, ರಾಯಣ್ಣ ಮಾಗನೂರು ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!