ರಾಣೆಬೇನ್ನೂರು: ಕೃಷಿ ಇಲಾಖೆಯ ವತಿಯಿಂದ ಸುಮಾರು ಒಂದು ಕೋಟಿ ವೆಚ್ಚದ ಕೃಷಿ ಯಂತ್ರೋಪಕರಣಗಳನ್ನು ಶಾಸಕರಾದ ಪ್ರಕಾಶ ಕೋಳಿವಾಡರು ರೈತರಿಗೆ ವಿತರಣೆ ಮಾಡಿದರು.
ನಗರದ ಕೃಷಿ ಇಲಾಖೆಯ ಆವರಣದಲ್ಲಿ ತಾಲೂಕಿನ ಸುಮಾರು ಮೂವತ್ತು ಗ್ರಾಮದ ರೈತರಿಗೆ ವಿವಿಧ ಕೃಷಿ ಯಂತ್ರೋಪಕರಣಗಳು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ತಾಲೂಕಿನ ರೈತರಿಗೆ ಅನುಕೂಲಕ್ಕಾಗಿ ಈ ಕೃಷಿ ಯಂತ್ರೋಪಕರಣಗಳನ್ನು ಹೆಚ್ಚಾಗಿ ತಂದು ನೀಡಲಾಗಿದೆ. ಆದರೆ ರೈತರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಯಶಸ್ವಿ ಕಾಣಬೇಕು ಎಂದು ತಿಳಿಸಿದರು.
ಅಲ್ಲದೇ ಸರ್ಕಾರದ ಯೋಜನೆ ಪಡೆದುಕೊಂಡ ಕೆಲವರು ಬೇರೆಯವರಿಗೆ ಮಾರಾಟ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ. ದಯವಿಟ್ಟು ಆ ಕೆಲಸ ಯಾರು ಮಾಡಬಾರದು ಎಂದು ರೈತರಿಗೆ ಹೇಳಿದರು.
ಈ ಸಮಯದಲ್ಲಿ ಕೃಷಿ ಅಧಿಕಾರಿ ಶಾಂತಮಣಿ, ಅರವಿಂದ ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ