ರಾಣೆಬೇನ್ನೂರು: ಜಮ್ಮು&ಕಾಶ್ಮೀರದಲ್ಲಿ ಉಗ್ರರು ಹಿಂದುಗಳ ಮೇಲೆ ದಾಳಿ ಮಾಡಿ ಹತ್ಯೆಗೈದಿರುವುದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ಹಾಗೂ ಮೇಣದ ಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಿದರು.
ವಿನಾಯಕ ನಗರದ ಕಾಂಗ್ರೆಸ್ ಕಾರ್ಯಾಲಯದಿಂದ ಪಂಜಿನ ಮೆರವಣಿಗೆ ಆರಂಭಿಸಿದರೆ ಬಿಜೆಪಿ ಮುಖಂಡರು ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನೆ ಮೂಲಕ ಬಸ್ ನಿಲ್ದಾಣಕ್ಕೆ ಬಂದು ಅಕ್ಕಪಕ್ಕದಲ್ಲಿ ಪ್ರತಿಭಟನೆ ನಡೆಸಿದರು.
ಉಗ್ರರಿಂದ ಹತ್ಯೆಗಾದವರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು. ಉಗ್ರರನ್ನು ಕೂಡಲೇ ಪತ್ತೆ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡುವಲ್ಲಿ ವಿಲವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡಲೇ ರಾಜೀನಾಮೆ ನೀಡಬೇಕು. ಮೃತಪಟ್ಟ ಎಲ್ಲ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಬೇಕು ಕಾಂಗ್ರೆಸ್ ಆಗ್ರಹ ಮಾಡಿದರೆ.
ಬಿಜೆಪಿಯವರು ಕೇಂದ್ರ ಸರ್ಕಾರ ಜಮ್ಮು&ಕಾಶ್ಮೀರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದನ್ನು ಸಹಿಸಲಾಗದೆ ಹಾಗೂ ಮುಕ್ತವಾಗಿ ದೇಶದ ಜನರು ಕಾಶ್ಮೀರ ಪ್ರವಾಸ ಕೈಗೊಳ್ಳಲು ಅನುಕೂಲ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಕಪು$್ಪಚುಕ್ಕೆ ತರಬೇಕು ಎಂಬ ಉದ್ದೇಶದಿಂದ ನೆರೆಯ ರಾಷ್ಟ್ರ ಪಾಕಿಸ್ತಾನದಿಂದ ಬಂದ ಉಗ್ರರು ಹಿಂದುಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದಾರೆ.
ಇದು ಹೇಡಿಗಳ ಹೇಯ ಕೃತ್ಯ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇಂಥ ಟನೆಗಳನ್ನು ಮೆರುಕಳಸದೆ ಹತ್ಯೆ ಮಾಡಿದ ಉಗ್ರರನ್ನು ಸೆದೆಬಡಿಯುತ್ತಿದೆ. ಯಾವ ಕಾರಣಕ್ಕೂ ಇಂಥ ಹೇಡಿಗಳಿಗೆ ಹೆದರುವುದಿಲ್ಲ. ಉಗ್ರರ ರಕ್ತಪಾತದೊಂದಿಗೆ ಮೃತರ ಆತ್ಮಕ್ಕೆ ಕೇಂದ್ರ ಸರ್ಕಾರ ಶಾಂತಿ ಕೋರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಪ್ರಮುಖರಾದ ಪುಟ್ಟಪ್ಪ ಮರಿಯಮ್ಮನವರ, ಬೀರಪ್ಪ ಲಮಾಣಿ, ರಾಜು ಮಾದಮ್ಮನವರ, ಇಾರ್ನ್ ದಿಡಗೂರ, ನಾಗರಾಜ ಮರಿಯಮ್ಮನವರ, ರಮೇಶ ಬಿಸಲಹಳ್ಳಿ, ರವೀಂದ್ರಗೌಡ ಪಾಟೀಲ, ಬಸವರಾಜ ತಳವಾರ, ಶೇರುಖಾನ ಖಾಬೂಲಿ, ಶೇಖನಗೌಡ ಹೊಸಗೌಡ್ರ ಹಾಜರಿದ್ದರೆ.
ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಅರುಣಕುಮಾರ ಪೂಜಾರ, ಮಲ್ಲಣ್ಣ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಡಾ. ಬಸವರಾಜ ಕೇಲಗಾರ, ಪರಮೇಶಪ್ಪ ಗೂಳಣ್ಣನವರ, ರಮೇಶ ಗುತ್ತಲ, ಜಿ.ಜಿ. ಹೊಟ್ಟಿಗೌಡ್ರ, ಭಾರತಿ ಜಂಬಗಿ, ಪ್ರಕಾರ ಪೂಜಾರ, ಅನಿಲ ಸಿದ್ದಾಳಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
More Stories
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ನಾಡಿದ್ದು