16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಾಣೆಬೇನ್ನೂರು: ಜಮೀನಿನ ಎನ್ ಎ ಅಭಿವೃದ್ಧಿ ಪಡಿಸಿದ ಪ್ಲಾಟ್ ಗಳ ಇಸ್ವತ್ತು ನೀಡಲು ನಾಲ್ಕೂವರೆ ಲಕ್ಷ ಲಂಚ ಕೇಳಿ ನಂತರ ನಾಲ್ಕು ಲಕ್ಷ ಲಂಚ ಪಡೆಯುವಾಗ ಗ್ರಾಪಂ ಪಿಡಿಓ, ಉಪಾಧ್ಯಕ್ಷ ಸೇರಿ ಮೂವರು ಸದಸ್ಯರನ್ನ ಲೋಕಾಯುಕ್ತ ಪೋಲಿಸರ ಬಂಧಿಸಿದ್ದಾರೆ.

ತಾಲೂಕಿನ ಹಲಗೇರಿ ಗ್ರಾಮದಲ್ಲಿರುವ ಹಲಗೇರಿ ಗ್ರಾಪಂ ಪಿಡಿಓ ಕೆ.ಮಂಜುನಾಥ ಅವರು ಇಸ್ವತ್ತು ನೀಡಲು ಜಮೀನು ಮಾಲೀಕರಾದ ನವೀನ ಅಂದನೂರು ಹತ್ತಿರ ಒಂದು ಲಕ್ಷ ಲಂಚ ಪಡೆದಿದ್ದರು. ನಂತರ ಉಳಿದ ನಾಲ್ಕೂವರೆ ಲಕ್ಷ ಹಣ ನೀಡುವಂತೆ  ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಸದಸ್ಯರಾದ ಸೋಮಶೇಖರ್ ಕನ್ನಪ್ಪಳವರ, ಪ್ರಸನ್ನ ಬಣಕಾರ ಹಾಗೂ ಸೈಯದ್ ರೆಹಮಾನ್ ಕರ್ಜಗಿ ಜಮೀನಿನ ಮಾಲೀಕನ ಮೇಲೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ನವೀನ ಅವರು ನಾಲ್ಕು ಲಕ್ಷ ನೀಡಲು ಒಪ್ಪಂದ ಮಾಡಿಕೊಂಡಿದ್ದರು ಎಂದು ತಿಳಿದಿದೆ.

ನಂತರ ನವೀನ ಅವರು ಲೋಕಾಯುಕ್ತ ಪೋಲಿಸರಿಗೆ ದೂರು ನೀಡಿ ಆರೋಪಿಗಳನ್ನ ಬಂಧಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ದಾವಣಗೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ಸಿ ಮಾರ್ಗದರ್ಶನ ಮೂಲಕ ಕಾರ್ಯಾಚರಣೆ ಮಾಡಿದ  ಪೋಲಿಸ್ ನಿರೀಕ್ಷಕರಾದ ಬಸವರಾಜ ಹಳಬಣ್ಣನವರ, ಸಿಬ್ಬಂದಿಗಳಾದ ಸಿ.ಎಮ್. ಬಾರ್ಕಿ, ಎಂ.ಕೆ.ನದಾಪ್ ಸೇರಿದಂತೆ ಇತರ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನ ವಶಪಡಿಸಿಕೊಂಡ ಕಾನೂನಿಗೆ ಒಪ್ಪಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!