ರಾಣೆಬೆನ್ನೂರ: ತಂದೆ ಸಾವಿನ ನೋವಿನಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಅಣ್ಣ-ತಂಗಿಗೆ ಉತ್ತಮ ಅಂಕ ದೊರೆತಿದೆ.
ತಾಲೂಕಿನ ಪದ್ಮಾವತಿಪುರ ತಾಂಡದ ( ಬಸಲಿಕಟ್ಟಿ ತಾಂಡ) ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು.
ತಂಗಿ ರಕ್ಷಿತಾಗೆ ಶೇ. 83 ಅಂಕ ದೊರೆತಿದ್ದರೆ, ಅಣ್ಣ ಧನರಾಜನಿಗೆ ಶೇ. 85ರಷ್ಟು ಅಂಕ ದೊರೆತಿದೆ.
ಇವರ ತಂದೆ ಹನುಮಂತಪ್ಪ ಎಸ್ಸೆಸ್ಸೆಲ್ಸಿ ಹಿಂದಿ ವಿಷಯದ ಪರೀಕ್ಷೆ ದಿನದಂದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದರು. ತಂದೆಯ ಶವ ಮನೆಯಲ್ಲಿದ್ದರೂ ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದು ಬಂದಿದ್ದರು.
ಮಕ್ಕಳು ಪರೀಕ್ಷೆ ಬರೆದು ಬಂದ ನಂತರ ತಂದೆಯ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.