ರಾಣೆಬೇನ್ನೂರು: ತಾಲೂಕಿನ ಹಸಿರಕರಕ್ಕಾಗಿ ಸುಮಾರು ಎರಡು ಕೋಟಿ ರೂ ವೆಚ್ಚದಲ್ಲಿ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ವನ) ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ತಾಲೂಕಿನ ಯಾವ ಭಾಗದಲ್ಲಿ ಮಾಡಬೇಕು ಎಂಬುದನ್ನು ಅಧಿಕಾರಿಗಳು ಹಾಗೂ ಮುಖಂಡರ ಜತೆ ಚರ್ಚಿಸಿ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ತಾಲೂಕಿನ ಗುಡಗೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ಸುಮಾರು ಹದಿನಾಲ್ಕು ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ರಾಣೆಬೇನ್ನೂರು ತಾಲೂಕಿನಲ್ಲಿ ಈಗಾಗಲೇ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದ್ದು ಸರ್ಕಾರದಿಂದ ಮಂಜೂರಾತಿ ದೊರೆತ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. ಅಲ್ಲದೆ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ತಾಲೂಕಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಆಧ್ಯತೆ ನೀಡುವ ಸಲುವಾಗಿ ಕಿಯೋನಿಕ್ಸ್ ಕಂಪನಿ ವತಿಯಿಂದ ರಾಣೆಬೇನ್ನೂರು ನಗರದಲ್ಲಿ ಪ್ಲಗ್ ಆಂಡ್ ಪೇ(plug and pay) ಕಂಪನಿಯ ತೆರೆಯಲು ಯೋಜನೆ ಹಾಕಲಾಗಿದೆ. ಈ ಹಿನ್ನೆಲೆ ಕಿಯೋನಿಕ್ಸ್ ಅಧ್ಯಕ್ಷರಾಗಿರುವ ಶರತ ಬಚ್ಚೆಗೌಡ ತಾಲೂಕಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಅದರ ಜೊತೆ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಸಹ ತಾಲೂಕಿಗೆ ಆಗಮಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ವಿವಿಧ ಸ್ಥಳಗಳಿಗೆ ಭೇಟಿ ಯೋಜನೆಯ ರೂಪರೇಷೆಗಳನ್ನು ಹಾಕಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ, ಇಂಜನೀಯರಗಳಾದ ರಮೇಶನಾಯಕ, ಸುಹಾಸ್, ನವೀನ ಸೇರಿದಂತೆ ವಿವಿಧ ಮುಖಂಡರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.
More Stories
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ನಾಡಿದ್ದು