ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಪೆಹಲ್ಗಾಂ ಹತ್ಯೆ ವಿಚಾರ ಬಿಟ್ಟು ರಾಜಕೀಯ ಭಾಷಣ. ರಸ್ತೆ ಬಂದ್ ಮಾಡಿದಕ್ಕೆ ಎಬಿವಿಪಿ ಮುಖಂಡ ಬಂಧನಕ್ಕೆ ಮುಂದಾದ ಪೋಲಿಸ್…

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ರಾಣೆಬೇನ್ನೂರು: ತಾಲೂಕಿನ ಹಸಿರಕರಕ್ಕಾಗಿ ಸುಮಾರು ಎರಡು ಕೋಟಿ ರೂ ವೆಚ್ಚದಲ್ಲಿ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ವನ) ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ತಾಲೂಕಿನ ಯಾವ ಭಾಗದಲ್ಲಿ ಮಾಡಬೇಕು ಎಂಬುದನ್ನು ಅಧಿಕಾರಿಗಳು ಹಾಗೂ ಮುಖಂಡರ ಜತೆ ಚರ್ಚಿಸಿ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ತಾಲೂಕಿನ ಗುಡಗೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ಸುಮಾರು ಹದಿನಾಲ್ಕು ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಣೆಬೇನ್ನೂರು ತಾಲೂಕಿನಲ್ಲಿ ಈಗಾಗಲೇ ಅಭಿವೃದ್ಧಿ ಸೇರಿದಂತೆ  ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದ್ದು ಸರ್ಕಾರದಿಂದ ಮಂಜೂರಾತಿ ದೊರೆತ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. ಅಲ್ಲದೆ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ತಾಲೂಕಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಆಧ್ಯತೆ ನೀಡುವ ಸಲುವಾಗಿ ಕಿಯೋನಿಕ್ಸ್ ಕಂಪನಿ ವತಿಯಿಂದ ರಾಣೆಬೇನ್ನೂರು ನಗರದಲ್ಲಿ ಪ್ಲಗ್ ಆಂಡ್ ಪೇ(plug and pay) ಕಂಪನಿಯ ತೆರೆಯಲು ಯೋಜನೆ ಹಾಕಲಾಗಿದೆ. ಈ ಹಿನ್ನೆಲೆ ಕಿಯೋನಿಕ್ಸ್ ಅಧ್ಯಕ್ಷರಾಗಿರುವ ಶರತ ಬಚ್ಚೆಗೌಡ ತಾಲೂಕಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಅದರ ಜೊತೆ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಸಹ ತಾಲೂಕಿಗೆ ಆಗಮಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ವಿವಿಧ ಸ್ಥಳಗಳಿಗೆ ಭೇಟಿ ಯೋಜನೆಯ ರೂಪರೇಷೆಗಳನ್ನು ಹಾಕಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ, ಇಂಜನೀಯರಗಳಾದ ರಮೇಶನಾಯಕ, ಸುಹಾಸ್, ನವೀನ ಸೇರಿದಂತೆ ವಿವಿಧ ಮುಖಂಡರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

 

 

 

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!