ರಾಣೆಬೇನ್ನೂರು: ಹೆರಿಗೆ ಆಸ್ಪತ್ರೆಯಲ್ಲಿ 15 ದಿನಗಳ ಕಾಲ ಶಸ್ತ್ರಚಿಕಿತ್ಸೆ ಕೊಠಡಿ ಬಂದ್ ಆಗಿದ್ದರಿಂದ ಮಹಿಳೆಯರು ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಅವರನ್ನ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ ತರಾಟೆಗೆ ತೆಗೆದುಕೊಂಡರು.
ನಗರದ ತಾಪಂ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಪಂ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೇ.45% ಹೆರಿಗೆಗಳು ಖಾಸಗಿ ಆಸ್ಪತ್ರೆಯಲ್ಲಿ ನಡೆದಿವೆ. ಸರ್ಕಾರದ ಆಸ್ಪತ್ರೆಯಲ್ಲಿ ಏಕೆ ಹೆರಿಗೆಗಳು ಆಗುತ್ತಿಲ್ಲ ಎಂದು ಪ್ರಶ್ನಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಡಾ. ರಾಜೇಶ್ವರಿ, ಶಸ್ತ್ರಚಿಕಿತ್ಸಾ ಕೊಠಡಿ ದುರಸ್ತಿ ಬಂದಿದ್ದರಿಂದ ಬಂದ್ ಮಾಡಲಾಗಿತ್ತು. ಕೂಡಲೇ ಸರಿಪಡಿಸಿ ಶಸ್ತ್ರಚಿಕಿತ್ಸೆ ಆರಂಭಿಸಲಾಗುವುದು ಎಂದು ತಿಳಿಸಿದರು
ಇನ್ನೂ ತಾಲೂಕಿನಲ್ಲಿ ಒಂದು ಇಲಾಖೆಯ ಅಧಿಕಾರಿಗಳು ಹಾಗೂ ಮತ್ತೊಂದು ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯ ಕೊರತೆ ಕಂಡು ಬಂದಿದೆ. ಇದರಿಂದ ಕಾಮಗಾರಿ ಹಾಗೂ ಆಡಳಿತ ಯಂತ್ರ ಸರಿಯಾಗಿ ಹೋಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಇತರ ಇಲಾಖೆಯೊಂದಿಗೆ ಸಮನ್ವತೆ ಕಾಪಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.
ತಾಲೂಕಿನಲ್ಲಿ ನಡೆದಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಬೇಕು. ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ಇದು ಪಂಚಾಯತ್ ರಾಜ್ಯ ಇಲಾಖೆಯ ಸೂಚನೆಯಿದೆ ಎಂದು ಸಿಡಿಪಿಒ ಪಾರ್ವತಿ ಹುಂಡೇಕಾರ ಅವರಿಗೆ ಸೂಚಿಸಿದರು.
ತಾಲೂಕಿನ ರಸ್ತೆ ಹಾಗೂ ಕಟ್ಟಡಗಳ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿರುವುದು ನೋಡಿದರೆ ಈ ಭಾಗದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜಲಜೀವನ ಮಿಷನ್ ಯೋಜನೆಯಡಿ ತ್ವರಿತವಾಗಿ ಕೆಲಸ ಮುಗಿಸಿ ಜನರಿಗೆ ನೀರು ಕೊಡಲು ಮುಂದಾಗಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ಗೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಎಇಇ ರಾಮಕೃಷ್ಣ, ಗುತ್ತಿಗೆದಾರರನ್ನು ಕರೆದುಕೊಂಡು ಶಾಸಕರಿಗೆ ಭೇಟಿ ಮಾಡಿಸಿದ್ದೇನೆ. ಆದರೂ ಕೆಲವರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಕೋಪಕೊಂಡ ಆಡಳಿತಾಧಿಕಾರಿ ರಂಗಸ್ವಾಮಿ, ಯಾರೂ ಕೆಲಸ ಮಾಡುವುದಿಲ್ಲ ಅಂತಹ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಅವರ ಕಾಮಗಾರಿ ಪರವಾನಗಿ ರದ್ದುಗೊಳಿಸಬೇಕು ಸೂಚಿಸಿದರು.
ಶಾಸಕ ಪ್ರಕಾಶ ಕೋಳಿವಾಡ, ತಾಪಂ ಇಒ ಪರಮೇಶ, ತಹಸೀಲ್ದಾರ್ ಆರ್.ಎಚ್. ಭಾಗವಾನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
More Stories
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ನಾಡಿದ್ದು