ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ರಾಣೆಬೇನ್ನೂರು: ಹೆರಿಗೆ ಆಸ್ಪತ್ರೆಯಲ್ಲಿ 15 ದಿನಗಳ ಕಾಲ ಶಸ್ತ್ರಚಿಕಿತ್ಸೆ ಕೊಠಡಿ ಬಂದ್ ಆಗಿದ್ದರಿಂದ ಮಹಿಳೆಯರು ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಅವರನ್ನ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ ತರಾಟೆಗೆ ತೆಗೆದುಕೊಂಡರು.

ನಗರದ ತಾಪಂ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಪಂ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ತಾಲೂಕಿನಲ್ಲಿ ಶೇ.45% ಹೆರಿಗೆಗಳು ಖಾಸಗಿ ಆಸ್ಪತ್ರೆಯಲ್ಲಿ ನಡೆದಿವೆ. ಸರ್ಕಾರದ ಆಸ್ಪತ್ರೆಯಲ್ಲಿ ಏಕೆ ಹೆರಿಗೆಗಳು ಆಗುತ್ತಿಲ್ಲ ಎಂದು ಪ್ರಶ್ನಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಡಾ. ರಾಜೇಶ್ವರಿ, ಶಸ್ತ್ರಚಿಕಿತ್ಸಾ ಕೊಠಡಿ ದುರಸ್ತಿ ಬಂದಿದ್ದರಿಂದ ಬಂದ್ ಮಾಡಲಾಗಿತ್ತು. ಕೂಡಲೇ ಸರಿಪಡಿಸಿ ಶಸ್ತ್ರಚಿಕಿತ್ಸೆ ಆರಂಭಿಸಲಾಗುವುದು ಎಂದು ತಿಳಿಸಿದರು

ಇನ್ನೂ ತಾಲೂಕಿನಲ್ಲಿ ಒಂದು ಇಲಾಖೆಯ ಅಧಿಕಾರಿಗಳು ಹಾಗೂ ಮತ್ತೊಂದು ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯ ಕೊರತೆ ಕಂಡು ಬಂದಿದೆ. ಇದರಿಂದ ಕಾಮಗಾರಿ ಹಾಗೂ ಆಡಳಿತ ಯಂತ್ರ ಸರಿಯಾಗಿ ಹೋಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಇತರ ಇಲಾಖೆಯೊಂದಿಗೆ ಸಮನ್ವತೆ ಕಾಪಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.

ತಾಲೂಕಿನಲ್ಲಿ ನಡೆದಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಬೇಕು. ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ಇದು ಪಂಚಾಯತ್ ರಾಜ್ಯ ಇಲಾಖೆಯ ಸೂಚನೆಯಿದೆ ಎಂದು ಸಿಡಿಪಿಒ ಪಾರ್ವತಿ ಹುಂಡೇಕಾರ ಅವರಿಗೆ ಸೂಚಿಸಿದರು.

ತಾಲೂಕಿನ ರಸ್ತೆ ಹಾಗೂ ಕಟ್ಟಡಗಳ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿರುವುದು ನೋಡಿದರೆ ಈ ಭಾಗದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜಲಜೀವನ ಮಿಷನ್ ಯೋಜನೆಯಡಿ ತ್ವರಿತವಾಗಿ ಕೆಲಸ ಮುಗಿಸಿ ಜನರಿಗೆ ನೀರು ಕೊಡಲು ಮುಂದಾಗಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಇಇ ರಾಮಕೃಷ್ಣ, ಗುತ್ತಿಗೆದಾರರನ್ನು ಕರೆದುಕೊಂಡು ಶಾಸಕರಿಗೆ ಭೇಟಿ ಮಾಡಿಸಿದ್ದೇನೆ. ಆದರೂ ಕೆಲವರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಕೋಪಕೊಂಡ ಆಡಳಿತಾಧಿಕಾರಿ ರಂಗಸ್ವಾಮಿ, ಯಾರೂ ಕೆಲಸ ಮಾಡುವುದಿಲ್ಲ ಅಂತಹ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಅವರ ಕಾಮಗಾರಿ ಪರವಾನಗಿ ರದ್ದುಗೊಳಿಸಬೇಕು ಸೂಚಿಸಿದರು.

ಶಾಸಕ ಪ್ರಕಾಶ ಕೋಳಿವಾಡ, ತಾಪಂ ಇಒ ಪರಮೇಶ, ತಹಸೀಲ್ದಾರ್ ಆರ್.ಎಚ್. ಭಾಗವಾನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!