ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ರಾಣೆಬೇನ್ನೂರು : ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಮಠದ ಧರ್ಮದರ್ಶಿಯಾಗಿ ಸುಮಾರು 2 ವರ್ಷಗಳಿಂದ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದು, ಕೆಲವರು ನನ್ನ ವಿರುದ್ದ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಧರ್ಮದರ್ಶಿ ಸಿದ್ದನಗೌಡ ಪಾಟೀಲ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ನನ್ನ ತೇಜೊವಧೆ ಮಾಡುವ ದುರುದ್ದೇಶದಿಂದ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿಲ್ಲ ಎಂದರು.
ಮಠದ ಪರವಾಗಿ ಯಾವುದೇ ದೇಣಿಗೆಯನ್ನು ಆನ್‍ಲೈನ್ ಮೂಲಕ ನನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿಲ್ಲ. ಆರೋಪ ಮಾಡುವವರು ತಿಳಿಸಿರುವ ದಿನಾಂಕದಂದು ನನ್ನ ಮೊಬೈಲ್ ಖಾತೆಗೆ ಬಂದಿರುವ ಹಣ ಸ್ವಂತ ವಹಿವಾಟಿನ ವಿಚಾರವಾಗಿದ್ದು ಮಠಕ್ಕೆ ದೇಣಿಗೆ ಸಲ್ಲಿಸಿರುವುದಲ್ಲ. ನನ್ನ ಮೇಲೆ ದುರುದ್ದೇಶದಿಂದ ಹಣಕಾಸಿನ ದುರುಪಯೋಗದ ಆರೋಪ ಹೊರೆಸುವ ಹುನ್ನಾರ ಮೇಲ್ನೊಟಕ್ಕೆ ಗೊತ್ತಾಗುತ್ತಿದೆ. ನಾನು ಧರ್ಮದರ್ಶಿಯಾಗದೇ ಇರುವ ಸಮಯದಲ್ಲಿನ ವಹಿವಾಟಿನ ದಾಖಲೆ ಲಗತ್ತಿಸಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳ ಕುರಿತು ಮಠದ ಆಡಳಿತಾಧಿಕಾರಿಗಳು ಹಾಗೂ ನ್ಯಾಯಾಧೀಶರ ಬಳಿ ಅಫಿಡೆವಿಟ್ ಸಲ್ಲಿಸಲು ಹೇಳಿ ಒಂದು ತಿಂಗಳು ಕಳೆದರೂ ಇನ್ನೂ ಯಾರು ಅಫಡೆವಿಟ್ ಸಲ್ಲಿಸಿಲ್ಲ. ದಾಖಲೆ ಇದ್ದರೆ ಸಲ್ಲಿಸಲಿ. ಹಾಗೊಂದು ವೇಳೆ ಅಫಿಡೆವಿಟ್ ಸಲ್ಲಿಸದೇ ಹೋದರೆ ಇವರ ವಿರುದ್ದ ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇನೆ ಎಂದರು.
ಫೆ.10ರಂದು ರಾಣಿಬೆನ್ನೂರು ನಗರಕ್ಕೆ ಜ್ಯೋತಿಯಾತ್ರೆ ಆಗಮಿಸಿದ ಸಮಯದಲ್ಲಿ ರಥಯಾತ್ರೆಯ ಸೇವಕರು ಹಾಗೂ ಭಕ್ತರ ಮೇಲೆ ನಾನು, ನನ್ನ ಸಂಗಡಿಗರು ಸೇರಿ ಹಲ್ಲೆ ಮಾಡಿದ್ದಾರೆ ಎಂಬುದು ಸಹ ಸುಳ್ಳಿನ ಸಂಗತಿಯಾಗಿದೆ ಎಂದರು.
ಸಮಾಜದಲ್ಲಿ ನನ್ನ ಏಳಿಗೆ ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿ ಸೇರಿಕೊಂಡು ತೇಜೋವದೆ ಮಾಡಿ ನಾನು ತಲೆತೆಗ್ಗಿಸುವಂತೆ ಮಾಡುವ ಹುನ್ನಾರ ಅಡಗಿದೆ. ಒಂದು ವೇಳೆ ನನ್ನ ವಿರುದ್ದ ಆರೋಪಗಳ ಕುರಿತು ಮಠದ ಆಡಳಿತಾಧಿಕಾರಿ ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶರು ವಿಚಾರಣೆ ನಡೆಸಿದರೆ ಅದಕ್ಕೂ ಸಿದ್ದನಿದ್ದೇನೆ ಎಂದರು.
ಬಸವರಾಜ ಕುರವತ್ತಿ, ಶಂಬಣ್ಣ ಮಾಲದಾರ, ವಿಶ್ವನಾಥ ಕೂನಬೇವು, ಮಂಜುನಾಥ ಮಲ್ಲಾಪುರ, ಈಶಪ್ಪ ಮುದ್ದಿ, ವಿಶ್ವನಾಥ ಚನ್ನಪ್ಪನವರ ಸುದ್ದಿಗೋಷ್ಠಿಯಲ್ಲಿದ್ದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!