ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ರಾಣೆಬೇನ್ನೂರು : ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಮಠದ ಧರ್ಮದರ್ಶಿಯಾಗಿ ಸುಮಾರು 2 ವರ್ಷಗಳಿಂದ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದು, ಕೆಲವರು ನನ್ನ ವಿರುದ್ದ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಧರ್ಮದರ್ಶಿ ಸಿದ್ದನಗೌಡ ಪಾಟೀಲ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ನನ್ನ ತೇಜೊವಧೆ ಮಾಡುವ ದುರುದ್ದೇಶದಿಂದ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿಲ್ಲ ಎಂದರು.
ಮಠದ ಪರವಾಗಿ ಯಾವುದೇ ದೇಣಿಗೆಯನ್ನು ಆನ್‍ಲೈನ್ ಮೂಲಕ ನನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿಲ್ಲ. ಆರೋಪ ಮಾಡುವವರು ತಿಳಿಸಿರುವ ದಿನಾಂಕದಂದು ನನ್ನ ಮೊಬೈಲ್ ಖಾತೆಗೆ ಬಂದಿರುವ ಹಣ ಸ್ವಂತ ವಹಿವಾಟಿನ ವಿಚಾರವಾಗಿದ್ದು ಮಠಕ್ಕೆ ದೇಣಿಗೆ ಸಲ್ಲಿಸಿರುವುದಲ್ಲ. ನನ್ನ ಮೇಲೆ ದುರುದ್ದೇಶದಿಂದ ಹಣಕಾಸಿನ ದುರುಪಯೋಗದ ಆರೋಪ ಹೊರೆಸುವ ಹುನ್ನಾರ ಮೇಲ್ನೊಟಕ್ಕೆ ಗೊತ್ತಾಗುತ್ತಿದೆ. ನಾನು ಧರ್ಮದರ್ಶಿಯಾಗದೇ ಇರುವ ಸಮಯದಲ್ಲಿನ ವಹಿವಾಟಿನ ದಾಖಲೆ ಲಗತ್ತಿಸಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳ ಕುರಿತು ಮಠದ ಆಡಳಿತಾಧಿಕಾರಿಗಳು ಹಾಗೂ ನ್ಯಾಯಾಧೀಶರ ಬಳಿ ಅಫಿಡೆವಿಟ್ ಸಲ್ಲಿಸಲು ಹೇಳಿ ಒಂದು ತಿಂಗಳು ಕಳೆದರೂ ಇನ್ನೂ ಯಾರು ಅಫಡೆವಿಟ್ ಸಲ್ಲಿಸಿಲ್ಲ. ದಾಖಲೆ ಇದ್ದರೆ ಸಲ್ಲಿಸಲಿ. ಹಾಗೊಂದು ವೇಳೆ ಅಫಿಡೆವಿಟ್ ಸಲ್ಲಿಸದೇ ಹೋದರೆ ಇವರ ವಿರುದ್ದ ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇನೆ ಎಂದರು.
ಫೆ.10ರಂದು ರಾಣಿಬೆನ್ನೂರು ನಗರಕ್ಕೆ ಜ್ಯೋತಿಯಾತ್ರೆ ಆಗಮಿಸಿದ ಸಮಯದಲ್ಲಿ ರಥಯಾತ್ರೆಯ ಸೇವಕರು ಹಾಗೂ ಭಕ್ತರ ಮೇಲೆ ನಾನು, ನನ್ನ ಸಂಗಡಿಗರು ಸೇರಿ ಹಲ್ಲೆ ಮಾಡಿದ್ದಾರೆ ಎಂಬುದು ಸಹ ಸುಳ್ಳಿನ ಸಂಗತಿಯಾಗಿದೆ ಎಂದರು.
ಸಮಾಜದಲ್ಲಿ ನನ್ನ ಏಳಿಗೆ ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿ ಸೇರಿಕೊಂಡು ತೇಜೋವದೆ ಮಾಡಿ ನಾನು ತಲೆತೆಗ್ಗಿಸುವಂತೆ ಮಾಡುವ ಹುನ್ನಾರ ಅಡಗಿದೆ. ಒಂದು ವೇಳೆ ನನ್ನ ವಿರುದ್ದ ಆರೋಪಗಳ ಕುರಿತು ಮಠದ ಆಡಳಿತಾಧಿಕಾರಿ ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶರು ವಿಚಾರಣೆ ನಡೆಸಿದರೆ ಅದಕ್ಕೂ ಸಿದ್ದನಿದ್ದೇನೆ ಎಂದರು.
ಬಸವರಾಜ ಕುರವತ್ತಿ, ಶಂಬಣ್ಣ ಮಾಲದಾರ, ವಿಶ್ವನಾಥ ಕೂನಬೇವು, ಮಂಜುನಾಥ ಮಲ್ಲಾಪುರ, ಈಶಪ್ಪ ಮುದ್ದಿ, ವಿಶ್ವನಾಥ ಚನ್ನಪ್ಪನವರ ಸುದ್ದಿಗೋಷ್ಠಿಯಲ್ಲಿದ್ದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!