ರಾಣೆಬೇನ್ನೂರು ಸುದ್ದಿ.
ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಯನ್ನು ನಾನು ಬಿಟ್ಟಿ ಭಾಗ್ಯಗಳ ಅಂತ ಹೇಳುವುದಿಲ್ಲ ಆದರೆ ಮಹಿಳೆಯರ ದುಡ್ಡು ಮಹಿಳೆಯರಿಗೆ ನೀಡುತ್ತಿರುವ ಕೂಡುಕೊಳಿ ವ್ಯವಹಾರ ಎನ್ನಬಹುದು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ ಬಿಜೆಪಿ ಮಹಿಳಾ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಭಾರತದ ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿ ಅವರಿಗೆ ಮತ್ತೊಂದು ಬಾರಿ ಅಧಿಕಾರ ನೀಡಬೇಕಾದ್ರೆ ನೀವುಗಳು ಬಸವರಾಜ ಬೊಮ್ಮಾಯಿಗೆ ಮತ ನೀಡಬೇಕು. ನಾನು ಕಾಂಗ್ರೆಸ್ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ನಾನು ಬಿಟ್ಟಿ ಭಾಗ್ಯಗಳು ಅನ್ನುವುದಿಲ್ಲ. ಆದರೆ ಜನರ ಹಣವನ್ನು ತೆಗೆದುಕೊಂಡು ಜನರಿಗೆ ನೀಡುತ್ತಿದ್ದಾರೆ. ಸರ್ಕಾರ ಜನರ ಹಣವನ್ನು ತೆಗೆದುಕೊಂಡು ಅಭಿವೃದ್ಧಿ ಮಾಡುವ ಬದಲಾಗಿ ಅದೇ ದುಡ್ಡು ತೆಗೆದುಕೊಂಡು ತಮ್ಮ ಸರ್ಕಾರವನ್ನು ನಡೆಸುತ್ತಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯೆ, ನಟಿ ತಾರ ಅನುರಾದ ಮಾತನಾಡಿ ಭಾರತದ ಪ್ರಧಾನಿ ಮಂತ್ರಿಯಾದ ನರೇಂದ್ರ ಮೋದಿ ಅವರು ಮಹಿಳೆಯರಿಗಾಗಿ ನಾರಿಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅಲ್ಲದೇ ಮಹಿಳೆಯರ ರಾಜಕೀಯ ಸ್ಥಾನಮಾನ ನೀಡಬೇಕು ಎಂಬ ಉದ್ದೇಶದಿಂದ ನಿರ್ಮಾಲ ಸೀತಾರಾಮ ಅವರಿಗೆ ವಿತ್ತ ಸಚಿವ ಸ್ಥಾನ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚನ್ನಮ್ಮ ಬೊಮ್ಮಾಯಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ, ಶೋಭಾ ನಿಸ್ಸಿಮಗೌಡ್ರು, ಭಾರತಿ ಅಳವಂಡಿ, ಭಾರತಿ ಜಂಬಗಿ, ಸುಜಾತ ಆರಾಧ್ಯಮಠ, ಕವಿತಾ ಹೆದ್ದೇರಿ ಸೇರಿದಂತೆ ಇತರರು ಭಾಗಿಯಾಗಿದ್ದರು..
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.