ರಾಣೆಬೇನ್ನೂರು ಸುದ್ದಿ
ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆನಂದಸ್ವಾಮಿ ಗಡ್ಡದೇವರಮಠರಿಗೆ ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಜನಬೆಂಬಲ ಸಿಗ್ತಿಲ್ಲ ಎಂಬುದು ಅವರ ನಗರದಲ್ಲಿ ನಡೆಸಿದಂತಹ ರೋಡ್ ಶೋ ರ್ಯಾಲಿಯಲ್ಲಿ ಕಂಡು ಬಂದಿದೆ.
ತಾಲೂಕಿನ ಹಲವು ಗ್ರಾಮಗಳಿಗೆ ಒಂದು ಸುತ್ತ ಸಂಚರಿಸಿ ಮತಯಾಚನೆ ಮಾಡಿರುವ ಕಾಂಗ್ರೆಸ್ ನ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಜನ ಬೆಂಬಲ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾತಾಗಿದೆ.
ಇತ್ತ ಗಡ್ಡದೇವರಮಠ ಅವರು ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಬೇಟೆಗೆ ಇಳಿದಿದ್ದಾರೆ. ಆದರೆ ಮೋದಿ ಹವಾ ನಡುವೆ ಕಾಂಗ್ರೆಸ್ ಅಭ್ಯರ್ಥಿಗೆ ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಸರಿಯಾದ ಬೆಂಬಲ ಸೀಗುತ್ತಿಲ್ಲ ಎಂಬುದು ಸಹ ಕಂಡು ಬಂದಿದೆ. ಇದಕ್ಕೆ ಮೂಲ ಕಾರಣ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ನಡುವೆ ಸಂವಹನ ಕೊರತೆ, ಅಸಂಬದ್ಧ ಸಂಘಟನೆ, ಕಾರ್ಯಕರ್ತರ ಕಡೆಗಣಿಸುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಬಹದು ಎಂದು ತಾಲೂಕಿನ ಮೆಡ್ಲೇರಿ ಗ್ರಾಮದ ನಿಷ್ಠಾವಂತ ಕಾಂಗ್ರೆಸ್ ಮುಖಂಡನ ಮಾತಾಗಿದೆ.
ಶಾಸಕರ ಏಕಾಂಗಿ ಹೋರಾಟ… ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾದ ಪ್ರಕಾಶ ಕೋಳಿವಾಡ ಅವರು ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರವಾಗಿ ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದಾರೆ. ಜತೆಗೆ ಇತ್ತಿಚೆಗೆ ಆರ್.ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮೇಲೆ ಅವರು ಮತಯಾಚನೆ ಮಾಡುತ್ತಿರುವುದು ಕಂಡು ಬಂದಿದೆ. ಆದರೆ ಗ್ರಾಮಗಳಿಗೆ ತೆರಳಿದ ಸಮಯದಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ಅನ್ಯಾಯದ ಕುರಿತು ಕಾರ್ಯಕರ್ತರ ಶಾಸಕ ಪ್ರಕಾಶ ಕೋಳಿವಾಡರ ಮುಂದೆ ಹೇಳುತ್ತಿರುವುದು ಕಂಡು ಬಂದಿದೆ.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.